Wednesday, December 17, 2008

ಅವಳು

ಒದ್ದೆ ಪಾದಗಳ ಹೆಜ್ಜೆ ಜಾಡಿನಲ್ಲಿ ನಡೆಯಹೊರಟವಳು
ಕಾರಿರುಳ ಬಾನಿನಲಿ ಚಂದಿರನ ಹುಡುಕಿದಳು
ನದಿಯಲ್ಲದವಳು ಎಲೆಯಮೇಲೆ ಬಿದ್ದ ಮಳೆಹನಿಯಂಥವಳು
ಕಡಲ ಸೇರಲು ಹೊರಟಳು.
ದನಿಯಿಲ್ಲದವಳು ಮೌನಿ ಶಿಲೆಯಂಥವಳು
ಎದೆರಾಗವಾಗಲವಣಿಸಿದಳು.
ಬಾನಲ್ಲಿ ರವಿ ಜಾರಿದಾಗ ಕವಿದ ಮುಸ್ಸಂಜೆಯಂಥವಳು
ಎಣ್ಣೆಯಾರಿದ ಹಣತೆಯನು ಕಣ್ಬೆಳಕಿನಲಿ ಬೆಳಗುವವನಿಗಾಗಿ ಕಾದಳು.

ಚದುರಿದ ಕನಸುಗಳ ಹೆಕ್ಕಿತರಲು ಹೊರಟವಳು
ಹೊಳೆವ ಕಂಗಳಲಿ ನಕ್ಕವಳು
ಅಂಗಳದ ಗಿಡದಲ್ಲಿ ಬಿರಿದ ಮಲ್ಲಿಗೆಯಂಥವಳು
ವೈಶಾಖದ ಸುಡುಹಗಲಿನಲಿ
ಒದ್ದೆ ಪಾದಗಳ ಜಾಡಿನಲ್ಲಿ ನಡೆಯಹೊರಟಳು
ನಿನ್ನೆಯಾಗಸದಲಿ ಕಂಡಿದ್ದ ಚುಕ್ಕಿಯಂತೆ ಕಳೆದುಹೋದಳು.

7 comments:

Sushrutha Dodderi said...

nice.. :-)

Jagali bhaagavata said...

ಎಣ್ಣೆಯಾರಿದ ಹಣತೆಯನು ಕಣ್ಬೆಳಕಿನಲಿ "ಬೆಳಗುವವನಿಗಾಗಿ " ಕಾದಳು.....

ಹ್ಮ್...ಹ್ಮ್....ಬೇಗ ಸಿಗ್ಲಪ್ಪ :-)

sunaath said...

ಸುಂದರವಾದ ಕವನ.

Cinchu said...
This comment has been removed by the author.
Shreee said...

ಅಧ್ಬುತ !!!!!

Shreee said...
This comment has been removed by the author.
Blogger said...

gud one..